ಜಿ.ಎಸ್.ಶಿವರುದ್ರಪ್ಪ

Tuesday 4 November 2014 Labels:

ಡಾಡಾಡಾಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗಜಿಲ್ಲೆಯ ಶಿಕಾರಿಪುರದ ಹತ್ತಿರವಿರುವ ಈಸೂರುಗ್ರಾಮದಲ್ಲಿ ಫೆಬ್ರುವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.ತಾಯಿ ವೀರಮ್ಮ. ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳ ಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು,ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು. ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.

ಕುವೆಂಪು

Labels:

ಕುವೆಂಪು - ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, ಎರಡನೆ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ. 'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಕುವೆಂಪುರವರ ಮೊದಲ ಕಾವ್ಯನಾಮ-"ಕಿಶೋರ ಚಂದ್ರವಾಣಿ" -ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯತೊಡಗಿದರು. ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಪರಪುಟ್ಟ ಹಕ್ಕಿಯಂತೆ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

ಕರ್ಮ

Labels:


ಕರ್ಮ : ಮುನ್ನುಡಿಯಿಂದ...

ಎಸ್ ಎಲ್ ಭೈರಪ್ಪನವರು ಅಂದು ಕರ್ಮದ ಪ್ರಥಮ ಪ್ರತಿ ಓದಿ ನನಗೆ ಖುದ್ದು ಕಾಲು ಹಾಯಿಸಿ ಮೆಚ್ಚುಗೆ ವ್ಯಕ್ತಪಡಿಸಿದಾಗ ಎಲ್ಲಿಲ್ಲದ ನೆಮ್ಮದಿ. ನಾಟಕಕಾರನಾದ ನಾನು ನಾಟಕದ ರಚನೆ, ನಿರ್ದೇಶನ, ನಟನೆಯಿಂದ ಒಂದೂವರೆ ವರ್ಷಗಳ ಕಾಲ ಈ ಕಾದಂಬರಿಗಾಗಿ ದೂರವಾದೆ. ಪ್ರಸ್ತುತ ಕನ್ನಡ ಕಾದಂಬರಿ ಲೋಕ ನಿಂತ ನೀರಾಗಿದೆ ಎಂದು ಒಬ್ಬರು ಹಲುಬಿದ್ದನ್ನು ಕಂಡು ಕಾದಂಬರಿಯಲ್ಲಿ ತೊಡಗಲು ಮನಸಾಯಿತು. ಅದು ದುಸ್ಸಾಹಸವೋ, ಕಾಲಹರಣವೋ ಓದುಗರು ತಿಳಿ ಹೇಳಿ. ತಂದೆಯ ಸಾವಿನ ನಂತರದಲ್ಲಿ ಪ್ರಸ್ತುತ ನಗರ ಸಮಾಜದ ವ್ಯಕ್ತಿ ಹದಿನೈದು ದಿನಗಳ ಸಮಯದಲ್ಲಿ ಹಲವಾರು ಹೊಳಹುಗಳನ್ನು ಕಂಡು ನಂಬಿಕೆ ಮತ್ತು ಶ್ರದ್ಧೆಯ ತೊಳಲಾಟದಲ್ಲಿ ಸಿಲುಕುತ್ತಾನೆ. ಹೊಳಹುಗಳಿಂದ ಪ್ರಾರಂಭವಾಗಿ ಕೊನೆಯವರೆಗೆ ಆತನ್ನಲ್ಲಿ ಆಗುವ ಸ್ಥಿತ್ಯಾಂತರದ ಯಾನವೇ ಕರ್ಮ.

ಕರ್ಮದ ಬರವಣಿಗೆಯ ಆರಂಭದಲ್ಲಿ ನನ್ನಲ್ಲಿದ್ದ ಹಲವಾರು ತಾತ್ವಿಕ ಗೊಂದಲಕ್ಕೆ ಎಸ್ ಎಲ್ ಭೈರಪ್ಪನವರು ಸೂಕ್ತ ವಿಚಾರಗಳೊಂದಿಗೆ ನೆಲೆಗಟ್ಟನ್ನು ಒದಗಿಸಿದರು, ನಾಗರಾಜ ಶ್ರೌತಿಗಳು ಹದಿನೈದು ದಿನಗಳವರೆಗಿನ ಕಾರ್ಯದ ಪೂರ್ಣ ಪಾಠ ಹೆಳೀಕೂಟ್ಟರು.ಶತಾವಧಾನಿ ಅರ್ ಗಣೇಶರು ಕಾದಂಬರಿಯಲ್ಲಿನ ಸಂಸ್ಕ್ರ್ತತ ಭಾಗಗಳನ್ನು ತಿದ್ದಿಕೊಟ್ಟರು. ಇವರೆಲ್ಲರಿಗೂ ನನ್ನ ಸಾಷ್ಟಾಂಗ ಧನ್ಯವಾದ.